ಹೊಸದಿಗಂತ ವರದಿ ಶಿವಮೊಗ್ಗ :
ದಾವಣಗೆರೆಯಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ದೇಶ ದ್ರೋಹಿಗಳಿಗೆ ಗುಂಡಿಕ್ಕಿ ಕೊಲ್ಲುವ ಕಾನೊನು ತರುವಂತೆ ಹೇಳಿಕೆ ನೀಡಿದ್ದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಫೆ.15 ರಂದು ವಿಚಾರಣೆಗೆ ಹಾಜರಾಗುವಂತೆ ದಾವಣಗೆರೆ ಪೊಲೀಸರು ಶನಿವಾರ ನೊಟೀಸ್ ನೀಡಿದ್ದಾರೆ.
ಈಶ್ವರಪ್ಪನವರ ಹೇಳಿಕೆ ವಿರುದ್ಧ ದಾವಣಗೆರೆಯಲ್ಲಿ ಪ್ರಕರಣ ದಾಖಲಾಗಿತ್ತು.ಹೀಗಾಗಿ ಇಂದುಬೆಳಗ್ಗೆ ನೊಟೀಸ್ ಸಮೇತ ಮಲ್ಲೇಶ್ವರ ನಗರದಲ್ಲಿರುವ ಈಶ್ವರಪ್ಪ ಮನೆಗೆ ಬಂದ ಪೊಲೀಸರು ಖುದ್ದು ನೊಟೀಸ್ ನೀಡಿದ್ದಾರೆ.