ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ನಾಯಕಿಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಡಿಎಂಕೆ ನಾಯಕನ ವಿರುದ್ಧ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಡಿಎಂಕೆ ನಾಯಕನ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ.
ಡಿಎಂಕೆ ನಾಯಕನ ಹೇಳಿಕೆ ವಿವಾದ ಬಗ್ಗೆ ಮಾತನಾಡಿದ ಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್ , ಈ ವಿಷಯದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಯಾಕೆ ಸುಮ್ಮನಿದ್ದಾರೆ? ಮುಖ್ಯಮಂತ್ರಿ ಈ ವಿಷಯದಲ್ಲಿ ನಮ್ಮ ಪರವಾಗಿ ನಿಲ್ಲಬೇಕು ಎಂದು ನಾನು ಬಯಸುತ್ತೇನೆ ಎಂದಿದ್ದಾರೆ.
ಇದಕ್ಕಿಂತ ಮುನ್ನ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಬಗ್ಗೆ ಡಿಎಂಕೆ ವಕ್ತಾರ ಸೈದಾಯಿ ಸಾದಿಕ್ ಮಾಡಿರುವ ಅವಹೇಳನಕಾರಿ ಕಾಮೆಂಟ್ಗಳಿಗೆ ಸಂಸದೆ ಕನಿಮೋಳಿ ಕ್ಷಮೆಯಾಚಿಸಿದ್ದಾರೆ.
ಡಿಎಂಕೆ ನಾಯಕ ಸಾದಿಕ್ ಅವರು ತಮಿಳುನಾಡಿನ ನಟ-ಬಿಜೆಪಿ ನಾಯಕರಾದ ನಮಿತಾ, ಖುಷ್ಬೂ ಸುಂದರ್, ಗೌತಮಿ ಮತ್ತು ಗಾಯತ್ರಿ ರಘುರಾಮ್ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು.
ಪುರುಷರು ಮಹಿಳೆಯರನ್ನು ನಿಂದಿಸಿದಾಗ, ಅವರು ಬೆಳೆದ ರೀತಿ ಮತ್ತು ಅವರು ಬೆಳೆದ ವಿಷಕಾರಿ ವಾತಾವರಣವನ್ನು ತೋರಿಸುತ್ತದೆ. ಈ ಪುರುಷರು ಮಹಿಳೆಯ ಗರ್ಭವನ್ನು ಅವಮಾನಿಸುತ್ತಾರೆ. ಅಂತಹ ವ್ಯಕ್ತಿಗಳು ತಮ್ಮನ್ನು ಕಲೈಂಜರ್ ಅವರ ಅನುಯಾಯಿಗಳೆಂದು ಕರೆದುಕೊಳ್ಳುತ್ತಾರೆ. ಇದು ಹೊಸ ದ್ರಾವಿಡ ಮಾದರಿಯು ಸಿಎಂ ಸ್ಟಾಲಿನ್ ಆಳ್ವಿಕೆಯಲ್ಲಿದೆಯೇ ಎಂದು ಖುಷ್ಬೂ ಟ್ವೀಟ್ ಮಾಡಿದ್ದರು.
I apologise as a woman and human being for what was said.This can never be tolerated irrespective of whoever did it,of the space it was said or party they adhere to.And I’m able to openly apologise for this because my leader @mkstalin and my party @arivalayam don’t condone this. https://t.co/FyVo4KvU9A
— Kanimozhi (கனிமொழி) (@KanimozhiDMK) October 27, 2022
ಟ್ವೀಟ್ ಗಮನಿಸಿದ ಕನಿಮೊಳಿ ತಕ್ಷಣವೇ ಕ್ಷಮೆಯಾಚಿಸಿದ್ದಾರೆ. ಅವರು ಹೇಳಿದ ಮಾತಿಗಾಗಿ ಮಹಿಳೆ ಮತ್ತು ಮನುಷ್ಯನಾಗಿ ಕ್ಷಮೆಯಾಚಿಸುತ್ತೇನೆ. ಇದನ್ನು ಯಾರೇ ಮಾಡಿದರೂ, ಹೇಳಿದ ಜಾಗ ಅಥವಾ ಅವರು ಬದ್ಧವಾಗಿರುವ ಪಕ್ಷವನ್ನು ಲೆಕ್ಕಿಸದೆ ಇಂಥದ್ದನ್ನು ಎಂದಿಗೂ ಸಹಿಸಲು ಸಾಧ್ಯವಿಲ್ಲ . ನನ್ನ ನಾಯಕ ಸ್ಟಾಲಿನ್ ಮತ್ತು ನನ್ನ ಪಕ್ಷ ಡಿಎಂಕೆ ಇದನ್ನು ಕ್ಷಮಿಸದ ಕಾರಣ ನಾನು ಬಹಿರಂಗವಾಗಿ ಕ್ಷಮೆಯಾಚಿಸುತ್ತಿದ್ದೇನೆ ಎಂದು ಕನಿಮೊಳಿ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ನಾಯಕಿಯರೂ ಆಗಿರುವ ನಾಲ್ವರು ನಟಿಯರನ್ನು ಡಿಎಂಕೆ ಸಾದಿಕ್ ಐಟಂ ಎಂದು ಕರೆದಿದ್ದಾರೆ. ತಮಿಳುನಾಡಿನಲ್ಲಿ ಕಮಲ ಅರಳಲಿದೆ ಎನ್ನುತ್ತಾರೆ ಖುಷ್ಬೂ. ಅಮಿತ್ ಶಾ ತಲೆಯಲ್ಲಿ ಕೂದಲು ಮತ್ತೆ ಬೆಳೆಯುತ್ತದೆ ಎಂದು ನಾನು ಹೇಳುತ್ತೇನೆ ಆದರೆ ತಮಿಳುನಾಡಿನಲ್ಲಿ ಕಮಲ ಅರಳುವ ಸಾಧ್ಯತೆ ಇಲ್ಲ ಎಂದು ಸಾದಿಕ್ ಹೇಳಿದ್ದರು.