ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಜಾಬ್ ವಿವಾದದ ನಡುವೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಶಾಸಕ ಜಮೀರ್ ಅಹ್ಮದ್ ಇದೀಗ ಕ್ಷಮೆಯಾಚಿಸಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಕ್ಷಮೆಯಾಚಿಸಿದ್ದ ಜಮೀರ್, ಉದ್ದೇಶಪೂರ್ವಕವಾಗಿ ಹೇಳಿಲ್ಲ, ಹೆಣ್ಣು ಮಕ್ಕಳ ಮೇಲಿನ ಕಾಳಜಿಯಿಂದ ಹೀಗೆ ಮಾತನಾಡಿರುವೆ. ಯಾರ ಮನಸ್ಸಿಗೂ ನೋವುಂಟು ಮಾಡುವ ಉದ್ದೇಶದಿಂದ , ಅಗೌರವ ತೋರುವ ಉದ್ದೇಶದಿಂದ ನಾನು ಹೇಳಿಲ್ಲ, ಮನಸ್ಸಿಗೆ ನೋವಾಗಿದ್ದರೆ ನಾನು ಕ್ಷಮೆಯಾಚಿಸುವೆ ಎಂದು ಟ್ವೀಟ್ ಮಾಡಿದ್ದಾರೆ.
ಹೆಣ್ಣು ಮಕ್ಕಳು ಹಿಜಾಬ್ ಧರಿಸದೇ ಇರುವುದ್ರಿಂದ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಅನ್ನೋ ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡ ಅಸಮಾಧಾನಗೊಂಡಿದ್ದರು. ಬಳಿಕ ಕೆಪಿಸಿಸಿ ಶಿಸ್ತು ಸಮತಿ ಅಧ್ಯಕ್ಷ ರೆಹಮನ್ ಖಾನ್ ನೋಟೀಸ್ ಜಾರಿ ಮಾಡಲಾಗಿದ್ದು, ಹೇಳಿಕೆ ಕುರಿತು ವಿವರಣೆ ನೀಡುವಂತೆ ಸೂಚಿಸಿತ್ತು.