ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಲ್ಲಾ ಬಿಜೆಪಿ ಯುವರ್ಮೋರ್ಚಾ ಮುಖಂಡರು ಮತ್ತು ಕಾರ್ಯಕರ್ತರು ಉಡುಪಿ ನಗರದ ಬ್ರಹ್ಮಗಿರಿ ಸರ್ಕಲ್ನಲ್ಲಿ ಅಳವಡಿಸಿದ ವೀರ ಸಾವರ್ಕರ್ ಬ್ಯಾನರ್ಗೆ ಕಾಂಗ್ರೆಸ್ ಆಕ್ಷೇಪವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬುಧವಾರ ಬೆಳಿಗ್ಗೆ ಮುತ್ತಿಗೆ ಹಾಕಲು ಯತ್ನಿಸಿದರು
ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಅಕ್ಷಿತ್ ಶೆಟ್ಟಿ ಹೆರ್ಗ ಸೇರಿದಂತೆ ಮೊದಲಾದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು.
ಈ ಸಂದರ್ಭದಲ್ಲಿ ಪೋಲಿಸರು ಅವರನ್ನು ಕಾಂಗ್ರೆಸ್ ನ ಕಚೇರಿಗೆ ಮುತ್ತಿಗೆ ಹಾಕುವುದನ್ನು ತಡೆದು ವಾಪಾಸು ಕಳುಹಿಸಿದ್ದಾರೆ.