ಹೊಸದಿಗಂತ ವರದಿ ಹುಬ್ಬಳ್ಳಿ:
ಕುಕ್ಕರ್ ಬಾಂಬ್ಗೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಪರಿಪೂರ್ಣವಾಗಿ ಅರ್ಥೈಸಿಕೊಂಡು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮರ್ಥಿಸಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ಕೊಟ್ಟರು.
ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ ಅವರೇ ಕುಕ್ಕರ್ ಸ್ಪೋಟವನ್ನು ಆಕಸ್ಮಿಕ ಘಟನೆ ಎಂದಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆಯ ಪೂರ್ಣ ಪಾಠವನ್ನು ಓದಿಕೊಂಡು, ನೋಡಿಕೊಂಡು ಮಾತನಾಡಲಿ ಎಂದು ಹರಿಹಾಯ್ದರು.
ಎಂಇಎಸ್ ಕಳೆದ 50 ವರ್ಷದಿಂದ ಪುಂಡಾಟಿಕೆ ನಡೆಸುತ್ತಿದೆ. ಅದನ್ನು ಯಾವ ರೀತಿ ಹದ್ದುಬಸ್ತಿನಲ್ಲಿ ಇಡಬೇಕು ಆ ಕೆಲಸ ಸರ್ಕಾರ ಮಾಡುತ್ತದೆ ಎಂದರು.
ಬೆಳಗಾವಿ ಅಧಿವೇಶನದಲ್ಲಿ ಹಲವಾರು ಪ್ರಮುಖ ಬಿಲ್ ಗಳನ್ನು ತರಲಿದ್ದೇವೆ. ಅದರಲ್ಲಿ ಮುಖ್ಯವಾಗಿ ಎಸ್ಸಿ ಹಾಗೂ ಎಸ್ಟಿ ಮೀಸಲಾಯಿ ಬಿಲ್ ಪಾಸಾಗಲಿದೆ. ಉತ್ತರ ಕರ್ನಾಟಕಕ್ಕೆ ಸಂಬಂಧಿಸಿ ಹಲವಾರು ವಿಚಾರ ಚರ್ಚೆಯಾಗಲಿವೆ ಎಂದು ತಿಳಿಸಿದರು.