ಕುಕ್ಕರ್ ಬ್ಲಾಸ್ಟ್ | ಶಾರೀಕ್‌ ಮನೆಗೆ ಪೊಲೀಸ್‌ ದಾಳಿ: ಸಂಬಂಧಿಕರ ಮನೆಯಲ್ಲೂ ಶೋಧ

ಹೊಸದಿಗಂತ ವರದಿ ಶಿವಮೊಗ್ಗ: 

ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆಯಲ್ಲಿರುವ ಶಂಕಿತ ಉಗ್ರರ ಪಟ್ಟಿಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಶಾರಿಕ್ ಆರೋಪಿಯಾಗಿರಬಹುದು ಎಂಬ ಕಾರಣಕ್ಕಾಗಿ ಒಟ್ಟು ಮೂರು ತಂಡಗಳಾಗಿ ಪೊಲೀಸರು ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿ, ಮಾಳೂರು ಹಾಗೂ ಆಗುಂಬೆ ಪೊಲೀಸ್ ಠಾಣೆ ಎಸ್‌ಐ ದಾಳಿಯಲ್ಲಿ ಭಾಗಿಯಾಗಿದ್ದಾರೆ.

ಶಾರೀಕ್ ಚಿಕ್ಕಮ್ಮನ ಮನೆ ಸೇರಿದಂತೆ ಸಂಬಂಧಿಕರ ಒಟ್ಟು ನಾಲ್ಕು ಮನೆಗಳ ಮೇಲೆ ಪೊಲೀಸರು ರೇಡ್ ಮಾಡಿದ್ದಾರೆ. ಹಲವು ದಾಖಲೆಗಳನ್ನು ತೀರ್ಥಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!