ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ನಡುವೆ ಕೊಚ್ಚಿಯಲ್ಲಿರುವ ಕೇಂದ್ರ ಗುಪ್ತಚರದಳದ ಪ್ರಧಾನ ಕಚೇರಿಯಲ್ಲಿ ಎನ್ಐಎ, ಗುಪ್ತಚರ ದಳ ಸೇರಿದಂತೆ ವಿವಿಧ ತನಿಖಾ ಏಜೆನ್ಸಿಗಳ ಉನ್ನತಾಧಿಕಾರಿಗಳು ಸಭೆ ನಡೆಸಿ, ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಅದರ ಹಿನ್ನೆಲೆ, ಶಂಕಿತ ಉಗ್ರ ಶಾರಿಕ್ ಹೊಂದಿರುವ ಉಗ್ರಜಾಲ, ಇಲ್ಲಿಯವರೆಗೆ ದೊರೆತಿರುವ ಮಾಹಿತಿಗಳನ್ನು ಹಂಚಿಕೊಂಡು ಚರ್ಚೆ ನಡೆಸಿ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.