ಕೊರೋನಾ ಅಲರ್ಟ್: ನಾಳೆ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಸಭೆ ಕರೆದ ಕೇಂದ್ರ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದಲ್ಲಿ ಕೊರೋನಾ ಹೆಚ್ಚುತ್ತಿದ್ದು, ಈ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಸರಕಾರ ನಾಳೆ ಬೆಳಗ್ಗೆ 10 ಗಂಟೆಗೆ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಆರೋಗ್ಯ ಸಚಿವರು ಸಭೆ ನಡೆಸಲಿದ್ದಾರೆ ಎಂದು ವಿಕಾಸಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಕೇಂದ್ರ ಆರೋಗ್ಯ ಇಲಾಖೆಯಿಂದ ನಾಳೆ ಸಭೆ ನಡೆಸಲಾಗುವುದು. ಗುರುವಾರ ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯ ಅಧಿಕಾರಿಗಳು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಚರ್ಚೆ ನಡೆಸಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!