ರಾಜ್ಯದಲ್ಲೂ ಕೊರೋನಾ ಆತಂಕ: ಜೀನೋಮ್‌ ಸೀಕ್ವೆನ್ಸಿಂಗ್‌ಗೆ ಕ್ರಮ ಎಂದ’ಸಚಿವ ಸುಧಾಕರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ವಿದೇಶಗಳಲ್ಲಿ ಕೊರೋನಾ ಏರಿಕೆ ದೇಶದಲ್ಲೂ ಆತಂಕ ಶುರುವಾಗಿದ್ದು, ಹೀಗಾಗಿ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಇದೀಗ ಈ ಸೂಚನೆ ಸಲುವಾಗಿ ರಾಜ್ಯದಲ್ಲೂ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಚೀನಾ, ಜಪಾನ್ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ ಲಸಿಕೆಯ ಮೂರನೇ ಡೋಸ್ ಪಡೆಯಲು ಆದ್ಯತೆ ನೀಡಬೇಕಿದೆ. ಹೊಸದಾಗಿ ಸೋಂಕಿಗೊಳಗಾಗುವವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸ್ ಪರೀಕ್ಷೆಗೆ ನೀಡಲು ಕೇಂದ್ರ ಸರ್ಕಾರದಿಂದ ಸೂಚನೆ ಬಂದಿದೆ ಎಂದರು.

ಮುಂದಿನ ತೀರ್ಮಾನ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಸಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅದೇ ರೀತಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅತಿ ಹೆಚ್ಚು ಪ್ರಯಾಣಿಕರು ಬರುತ್ತಿದ್ದಾರೆ. ಇಲ್ಲಿಯೂ ನಿಗಾ ಇರಿಸಲು ಆರಂಭಿಸಲಾಗುವುದು. ಎರಡು ಡೋಸ್ಗಳಲ್ಲಿ ಶೇ.100 ರಷ್ಟು ಸಾಧನೆಯಾಗಿದೆ. ಆದರೆ ಅನೇಕರು ಮೂರನೇ ಡೋಸ್ ಪಡೆದಿಲ್ಲ. ಹೀಗಾಗಿ ಜನರು ಮುಂದೆ ಬಂದು ಮೂರನೇ ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!