ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ವೈದ್ಯರ ಸಲಹೆ ಮೇಲೆ ಆಸ್ಪತ್ರೆಗೆ ದಾಖಲಾಗಿದ್ದು, ಸಂಪರ್ಕಕ್ಕೆ ಬಂದ ಎಲ್ಲರಿಗೂ ಪರೀಕ್ಷೆ ಮಾಡಿಸುವಂತೆ ಮನವಿ ಮಾಡಿದ್ದಾರೆ.
ಕೊರೋನಾ ಹೆಚ್ಚಾದ ಹಿನ್ನೆಲೆ ಹಲವಾರು ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿದ್ದೆ. ದಿನದ ನಂತರ ಜ್ವರ ಬಾಧಿಸಿತ್ತು. ಕೋವಿಡ್ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಎಂದು ಬಂದಿದೆ. ಈ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಎಲ್ಲರೂ ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ.