ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಶಾಸಕರಿಗೆ ಮತ್ತು ಕಾರ್ಯಕರ್ತರಿಗೆ ಈ ಸಂಕ್ರಾಂತಿಯ ದಿನ ಶುಭ ಸುದ್ದಿ ಸಿಗಲಿದೆಯೇ? ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿಗಮಮಂಡಳಿ ಪಟ್ಟಿಯನ್ನು ಈ ಸಾಯಂಕಾಲ ಅಷ್ಟರಲ್ಲಿ ಪ್ರಕಟಿಸುವುದಾಗಿ ಹೇಳಿದ್ದಾರೆ. ಆದರೆ ಚುನಾವಣೆ ಸಮಯದಲ್ಲಿ ಮಾತನಾಡಬೇಕಾದ ಘೋಷಣೆಯೊಂದೇ ಉಳಿದಿದೆ ಎಂದು ಹೇಳಿದ್ದಾರೆ.
ಡಿಕೆ ಶಿವಕುಮಾರ್ ನಿಗಮಮಂಡಳಿ ಪಟ್ಟಿಯ ಬಿಡುಗಡೆಯು ಸಂಕ್ರಾಂತಿಗಿಂತ ಮುಂದೆ ಹೋಗುವುದಿಲ್ಲ ಎಂದು ಹೇಳಿದ್ದರು. ಅವರು ಸಂಜೆಯಷ್ಟರಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವುದಕ್ಕೆ ಸಿದ್ಧರಾಗಿದ್ದಾರೆ. ಚುನಾವಣೆ ಸಮಯದಲ್ಲಿ ನಾವು ಕೊಟ್ಟಿದ್ದ ಮಾತನ್ನು ನಡೆಸಿಕೊಡುತ್ತೇವೆ ಎಂದು ಹೇಳಿದರು.
ಜನವರಿ 19ರಂದು ಸಂಜೆ 4 ಗಂಟೆಗೆ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಎಲೆಕ್ಷನ್ ಕಮಿಟಿ ಸಭೆ ನಡೆಯುವುದು. ಈ ಸಭೆಯಲ್ಲಿ ನಮ್ಮ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಾಗುತ್ತಾರೆ. ಈ ಸಭೆಯಲ್ಲಿ ನಾವು ಲೋಕಸಭೆ ಅಭ್ಯರ್ಥಿಗಳ ಫೈನಲ್ ಮಾಡುವ ಸಂಬಂಧ ಸಭೆ ನಡೆಸುತ್ತೇವೆ. ಜನವರಿ 21ರಂದು ದಕ್ಷಿಣ ಕನ್ನಡದಲ್ಲಿ ಕಾರ್ಯಕರ್ತರ ಸಭೆ ನಡೆಯುವುದು ಎಂದು ಡಿಕೆ ಶಿವಕುಮಾರ್ ಮಾಹಿತಿ ನೀಡಿದರು.