ಭ್ರಷ್ಟಾಚಾರ ಆರೋಪ ಪ್ರಕರಣ: ಯಡಿಯೂರಪ್ಪ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರು ಸಲ್ಲಿಸಿದ್ದ ಅರ್ಜಿಯನ್ನು ಇಂದು (ಫೆಬ್ರವರಿ 20) ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಯಡಿಯೂರಪ್ಪ ಹಾಗೂ ಅವರ ಕೆಲವು ಕುಟುಂಬ ಸದಸ್ಯರ ವಿರುದ್ಧ ಖಾಸಗಿ ದೂರನ್ನು ಹೈಕೋರ್ಟ್ ಮರು ತನಿಖೆಗೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಬಿಎಸ್​ವೈ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದ್ರೆ, ಇದೀಗ ಸುಪ್ರೀಂಕೋರ್ಟ್ ಸಿಜೆಐ, ಇಂದು ಪ್ರಕರಣದ ವಿಚಾರಣೆ ನಡೆಸಲು ನಿರಾಕರಿಸಿದ್ದು, ಮತ್ತೊಂದು ದಿನ ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ.

ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧ ಮರು ವಿಚಾರಣೆಗೆ ಹೈಕೋರ್ಟ್ (Karnataka High Court) ಆದೇಶ ನೀಡಿತ್ತು. ಈ ಹಿಂದೆ ಪ್ರಾಸಿಕ್ಯೂಷನ್​​ಗೆ ಪೂರ್ವಾನುಮತಿ ಸಿಗದ ಕಾರಣ ಈ ಕೇಸ್ ವಜಾಗೊಂಡಿದ್ದು, ಮಾಜಿ ಸಿಎಂಗೆ ಕೊಂಚ ನೆಮ್ಮದಿ ಕೊಟ್ಟಿತ್ತು. ಬಳಿಕ ಹೈಕೋರ್ಟ್ ವಿಚಾರಣಾ ಕೋರ್ಟ್​​​ ಹಿಂದಿನ ವಜಾ ಆದೇಶ ರದ್ದುಪಡಿಸಿ, ಪ್ರಕರಣ ಮರು ವಿಚಾರಣೆಗೆ ಆದೇಶಿಸಿತ್ತು, ತನಿಖೆ ನಡೆಸುವಂತೆ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ಜಡ್ಜ್ ಕೋರ್ಟ್ ಸೂಚಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!