ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವವೇ ತಿರುಗಿ ನೋಡುವ ರೀತಿಯಲ್ಲಿ ಆಡಳಿತ ನಡೆಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಭಾರತದಾದ್ಯಂತ ಜನರು ಮೋದಿ ಅವರನ್ನು ಬೆಂಬಲಿಸಿದರೆ, ಬಿಜೆಪಿಯನ್ನು ಸೋಲಿಸಲು ಅತ್ತ I.N.D.I.A ಕೂಟ ಶ್ರಮಿಸುತ್ತಿದೆ. ಆದರೆ, ಕೊನೆ ಕ್ಷಣದಲ್ಲಿ I.N.D.I.A ಕೂಟದ ಪಕ್ಷ ಸೋಲಲಿದೆ ಎಂದು ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಭವಿಷ್ಯ ನುಡಿಡಿದ್ದಾರೆ.
ಹಿರೇಮಲ್ಲನಕೆರೆ, ಕೊಂಬಳಿ, ಸೋವೇನಹಳ್ಳಿ ಮತ್ತಿತರ ಕಡೆ ಪ್ರಚಾರ ಕಾರ್ಯಕ್ರಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ.
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರು ಸೇರಿದಂತೆ ಯಾರಿಗೂ ಸಮಧಾನವಿಲ್ಲ, ಹಣ ಮಾಡುವ ದಂಧೆಯಲ್ಲಿ ತೊಡಗಿದ್ದಾರೆ. ವಿಧಾನಸೌಧದ ಪ್ರತಿಯೊಂದು ಮಹಡಿಯಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.