ಚನ್ನಪಟ್ಟಣ ಉಪಚುನಾವಣೆಗೆ ಕೌಂಟ್​ಡೌನ್​.. ಏನೋ ದೊಡ್ಡದಾಗಿ ಸಿಗ್ನಲ್ ಕೊಟ್ರಾ ‘ದಳಪತಿ’?!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚನ್ನಪಟ್ಟಣ ಸಾಮ್ರಾಜ್ಯದ ಮೇಲೆ ಹಿಡಿತ ಸಾಧಿಸಲು ಡಿಕೆಶಿ ಸಹೋದರರು ಮತ್ತು ಕುಮಾರಸ್ವಾಮಿ ನಡುವೆ ಸಂಘರ್ಷ ಏರ್ಪಟ್ಟಿದೆ.

ಹೆಚ್.ಡಿ.ಕುಮಾರಸ್ವಾಮಿ ಇದೀಗ ಚನ್ನಪಟ್ಟಣ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದು, ಜೆಡಿಎಸ್ ನಲ್ಲಿ ತಯಾರಿ ಶುರುವಾಗಿದೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಲು ಒತ್ತಡ ಹೆಚ್ಚುತ್ತಿದೆ.

ನಿಖಿಲ್ ಸ್ಪರ್ಧೆಗೆ ಬೇಡಿಕೆ ಹೆಚ್ಚಾದ ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ನಿನ್ನೆ ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಈ ಹಂತದಲ್ಲಿ ನಿಖಿಲ್ ವಿರುದ್ಧ ಮಾತನಾಡುವಂತೆ ಕಾರ್ಯಕರ್ತರು ಬಹಿರಂಗವಾಗಿ ಒತ್ತಾಯಿಸಿದರು. ಹೀಗಾಗಿ ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ.

ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿಯವರು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್​ ದಾಸ್​ ಅಗರ್ವಾಲ್ ಅವರನ್ನು ಭೇಟಿ ಮಾಡಿದ್ದಾರೆ. ಜೊತೆಗೆ ಹೆಚ್​ಡಿಕೆ, ನಿಖಿಲ್​ ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ. ರಾಧಾಮೋಹನ್​ ದಾಸ್ ಅವರು ಕ್ಷೇತ್ರದ ವಿಚಾರದಲ್ಲಿ ಗೊಂದಲವಿಲ್ಲ ಎಂದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!