ರಾಮಲಲಾ ಪ್ರಾಣಪ್ರತಿಷ್ಠೆಗೆ ಕ್ಷಣಗಣನೆ: ಶಾರುಖ್​, ಸಲ್ಮಾನ್​, ಆಮಿರ್​ ಖಾನ್​ಗೆ ಇಲ್ಲ ಆಹ್ವಾನ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮ ಮಂದಿರದ ಉದ್ಘಾಟನೆ (Ram Mandir Inauguration) ಕ್ಷಣಗಣನೆ ಬಾಕಿ ಉಳಿದಿದ್ದು, ಈಗಾಗಲೇ ದೇಶ ವಿದೇಶಗಳಿಂದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹಲವು ಜನರು ಆಗಮಿಸುತ್ತಿದ್ದಾರೆ.

ಅನೇಕ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಸಿನಿಮಾ ನಟ-ನಟಿಯರ ಹೆಸರುಗಳು ಆಹ್ವಾನಿತರ ಪಟ್ಟಿಯಲ್ಲಿ ಇವೆ. ಈ ನಡುವೆ ಭಾರತೀಯ ಚಿತ್ರರಂಗದ ಕೆಲವು ಪ್ರಮುಖ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಿಲ್ಲ. ಸಲ್ಮಾನ್​ ಖಾನ್​ (Salman Khan), ಆಮಿರ್​ ಖಾನ್​, ಶಾರುಖ್​ ಖಾನ್​ (Shah Rukh Khan) ಮುಂತಾದ ನಟರನ್ನು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಸುದ್ದಿಯಾಗಿದೆ.

ಬಾಲಿವುಡ್​ನಲ್ಲಿ ಶಾರುಖ್​ ಖಾನ್​, ಆಮಿರ್​ ಖಾನ್​, ಸಲ್ಮಾನ್​ ಖಾನ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿರುವ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಈ ಮೂವರಿಗೆ ಸ್ಥಾನ ಸಿಕ್ಕಿಲ್ಲ. ಅಷ್ಟೇ ಅಲ್ಲದೇ, ಇನ್ನೂ ಅನೇಕ ಸೆಲೆಬ್ರಿಟಿಗಳಿಗೂ ಆಹ್ವಾನ ಪತ್ರಿಕೆ ತಲುಪಿಲ್ಲ ಎಂದು ಸುದ್ದಿ ಹರಿದಾಡುತ್ತಿದೆ.

ಹಿಂದಿ ಚಿತ್ರರಂಗದ ಹಿರಿಯ ನಟ ಅಮಿತಾಭ್​ ಬಚ್ಚನ್​ ಅವರನ್ನು ಆಹ್ವಾನಿಸಲಾಗಿದೆ. ಆದರೆ ಅವರ ಸೊಸೆ, ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್​ಗೆ ಆಹ್ವಾನ ನೀಡಿಲ್ಲ. ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ, ಕತ್ರಿನಾ ಕೈಫ್​, ಕರೀನಾ ಕಪೂರ್​ ಖಾನ್​, ಸೈಫ್​ ಅಲಿ ಖಾನ್​, ಕರಣ್​ ಜೋಹರ್​, ಶಿಲ್ಪಾ ಶೆಟ್ಟಿ, ಸಂಜಯ್ ದತ್​ ಮುಂತಾದ ಕಲಾವಿದರಿಗೂ ಆಹ್ವಾನ ತಲುಪಿಲ್ಲ.

ಅಕ್ಷಯ್​ ಕುಮಾರ್​, ರಜನಿಕಾಂತ್​, ಆಯುಷ್ಮಾನ್​ ಖುರಾನಾ, ಕಂಗನಾ ರಣಾವತ್​, ಆಲಿಯಾ ಭಟ್​, ರಣಬೀರ್​ ಕಪೂರ್​, ರಣದೀಪ್​ ಹೂಡಾ, ಅನುಷ್ಕಾ ಶರ್ಮಾ, ರಜನಿಕಾಂತ್​, ಅನುಪಮ್​ ಖೇರ್​, ಮಾಧುರಿ ದೀಕ್ಷಿತ್​, ರಿಷಬ್​ ಶೆಟ್ಟಿ, ಯಶ್​, ಅಜಯ್​ ದೇವಗನ್​, ಪ್ರಭಾಸ್​, ರಾಮ್​ ಚರಣ್​, ಸನ್ನಿ ಡಿಯೋಲ್​, ಮೋಹನ್​ಲಾಲ್​, ಸಂಜಯ್​ ಲೀಲಾ ಬನ್ಸಾಲಿ, ಚಿರಂಜೀವಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ಆಹ್ವಾನ ಪತ್ರಿಕೆ ತಲುಪಿರುವ ಬಗ್ಗೆ ವರದಿ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!