ಉಡುಪಿಯಲ್ಲಿ ಮತ ಎಣಿಕೆ : ಸಾರ್ವಜನಿಕರ ಸಂಚಾರಕ್ಕೆ ಬದಲಿ ವ್ಯವಸ್ಥೆ; ವಿವರ ಇಂತಿದೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಉಡುಪಿ ಜಿಲ್ಲಾ ಕೇಂದ್ರ ಸೈಂಟ್ ಸಿಸಿಲಿ ಶಾಲೆಯ ಆವರಣದಲ್ಲಿ ಉಡುಪಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆಯು ಮೇ 13 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು , ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಈ ಕೆಳಕಂಡಂತೆ ಬದಲಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೋಲಿಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಬ್ರಹ್ಮಗಿರಿ ಜಂಕ್ಷನ್ ನಿಂದ ಜೋಡುಕಟ್ಟೆಯ ವರೆಗೆ ದ್ವಿಪಥ ಸಂಚಾರ ರಸ್ತೆಯನ್ನು ಏಕ ಪಥ ಬಂದ್ ಮಾಡಿದ್ದು, ಒಂದೇ ಪಥದಲ್ಲಿ 2 ಕಡೆ ಸಂಚಾರ ಅನುವು ಮಾಡಿಕೊಡಲಾಗಿದೆ. ಅಜ್ಜರಕಾಡು ಸಾರ್ವಜನಿಕ ಆಸ್ಪತ್ರೆಯ ಕಡೆ ಇರುವ ರಸ್ತೆಯಲ್ಲಿ ಸಂಚಾರ ವ್ಯವಸ್ಥೆಗೆ ಅನುವು ಮಾಡಿಕೊಡುವುದು.

ಮಲ್ಪೆ, ಕುಂದಾಪುರ, ಕಿದಿಯೂರು ಕಡೆಯಿಂದ ಅಂಬಲಪಾಡಿ ಬ್ರಹ್ಮಗಿರಿ ಮುಖೇನಾ ಉಡುಪಿ ಕಡೆಗೆ ಹೋಗುವ ಎಲ್ಲಾ ಬಸ್ಸುಗಳು ಕರಾವಳಿ ಜಂಕ್ಷನ್, ಬನ್ನಂಜೆ, ಸಿಟಿ ಬಸ್ ನಿಲ್ದಾಣ ಮುಖೇನಾ ಬಸ್ಸು ನಿಲ್ದಾಣ ತಲುಪುವುದು.

ಸೈಂಟ್ ಸಿಸಿಲಿ ಶಾಲೆಯ ಸುತ್ತಮುತ್ತಲಿನ ಪ್ರದೇಶವು ನಿಷೇಧಿತ ಪ್ರದೇಶವಾಗಿದ್ದರಿಂದ, ಸದ್ರಿ ಪ್ರದೇಶದ 100 ಮೀಟರ್ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!