ದೇಶಾದ್ಯಂತ ಪ್ರತಿಭಟನೆ: ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಸಿಎಂ ಬೊಮ್ಮಾಯಿ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶಾದ್ಯಂತ ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ಖಂಡಿಸಿ, ಪ್ರತಿಭಟನೆ ನಡೆಸಲಾಗುತ್ತಿದೆ. ಕರ್ನಾಟಕದ ಮೈಸೂರು, ಚಿಕ್ಕಮಗಳೂರಿನಲ್ಲಿಯೂ ಪ್ರತಿಭಟನೆ ಶುರುವಾಗಿದೆ. ಇತರೆ ಜಿಲ್ಲೆಗಳಲ್ಲಿ ಆರಂಭಕ್ಕೂ ಮುನ್ನಲೇ ಸಿಎಂ ಬಸವರಾಜ ಬೊಮ್ಮಾಯಿಯವರು, ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೂ ಸೂಚಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚಿರಿಕೆ ವಹಿಸುವಂತೆ ಸೂಚಿಸಿದ್ದಾರೆ.
ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗಬಾರದು. ರಾಜ್ಯಾಧ್ಯಂತ ಕಾನೂನು ಕೈಗೆತ್ತಿಕೊಳ್ಳದಂತೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಗೆ ಎಲ್ಲಾ ಜಿಲ್ಲೆಯ ಎಸ್ಪಿಗಳೊಂದಿಗೆ ಸಭೆ ನಡೆಸಿ, ಖಡಕ್ ಸೂಚನೆ ನೀಡುವಂತೆಯೂ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!