ಹೊಸ ದಿಗಂತ ವರದಿ,ಮೈಸೂರು:
ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಉದಯಗಿರಿಯ ಸಾತಗಳ್ಳಿ ಲೇಔಟ್ನಲ್ಲಿ ಬುಧವಾರ ನಡೆದಿದೆ. ಸಂತೋಷ್ (26), ಭವ್ಯ (22) ಮೃತ ದಂಪತಿ.
ಸಂತೋಷ್ ಮತ್ತು ಭವ್ಯ ಕಳೆದ ಕೆಲದಿನಗಳಿಂದ ಆರ್ಥಿಕ ಸಮಸ್ಯೆಗೆ ಸಿಲುಕಿದ್ದರು. ಸಾಲ ಭಾದೆ ಹೆಚ್ಚಾಗಿತ್ತು. ಇದರಿಂದ ಬೇಸೆತ್ತ ದಂಪತಿ ಊಟದಲ್ಲಿ ವಿಷ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಉದಯಗಿರಿ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.