ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪಘಾತದಲ್ಲಿ ಮಗ ಮೃತಪಟ್ಟಿದ್ದಾನೆ. ಅವನನ್ನು ಬಿಟ್ಟರೆ ಬೇರೆ ಜೀವನ ಇಲ್ಲ ಎಂದು ತಂದೆ ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಛತ್ತೀಸ್ಗಢದ ರಾಯ್ಪುರದಲ್ಲಿ ಈ ಮನಕಲುಕುವ ಘಟನೆ ನಡೆದಿದೆ. ಕೃಷ್ಣಪಟೇಲ್ ಹಾಗೂ ರಮಾ ಬಾಯಿ ತಮ್ಮ ಮಗನನ್ನು ಇತ್ತೀಚೆಗಷ್ಟೇ ಕಳೆದುಕೊಂಡಿದ್ದರು. ಆತನಿಲ್ಲದ ಲೋಕ ಬೇಡ ಎಂದು ನಿರ್ಧರಿಸಿ ನಾಲ್ಕು ಪುಟಗಳ ಡೆತ್ನೋಟ್ ಹಾಗೂ ವಿಡಿಯೋ ಸಂದೇಶ ಮಾಡಿ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮಗ ಮೃತಪಟ್ಟಿದ್ದರಿಂದ ತಂದೆ-ತಾಯಿ ಇಬ್ಬರೂ ಮನನೊಂದಿದ್ದರು. ಆದಿತ್ಯ ದೇವಸ್ಥಾನದ ಕೆಲಸ ಮತ್ತು ಯಜ್ಞಕ್ಕೆ ಸಹಾಯ ಮಾಡಲು ಗ್ರಾಮದ ಪುರೋಹಿತರೊಂದಿಗೆ ಹೊರಗೆ ಹೋಗಿದ್ದ. ಪುತ್ರ ಮೊದಲು ಹೋಗಲು ಹಿಂಜರಿದಿದ್ದ. ಆದರೆ, ಆತನ ತಂದೆ, ‘ಇದು ದೇವರ ಕೆಲಸ.. ಹೋಗಿ ಬಾ’ ಎಂದು ಒತ್ತಾಯಿಸಿದ್ದರು. ಈ ವಿಚಾರವನ್ನು ನೆನೆದು, ನಾನು ತಪ್ಪು ಮಾಡಿದೆ ಅಂತ ತಂದೆ ವಿಡಿಯೋದಲ್ಲಿ ಕಣ್ಣೀರಿಟ್ಟಿದ್ದಾರೆ.



