ಕೊಲ್ಕತ್ತಾ ವೈದ್ಯೆ ಕೊಲೆ ಪ್ರಕರಣದಲ್ಲಿ ಪರಿಹಾರ ಘೋಷಿಸಿದ ಕೋರ್ಟ್: ಹಣವಲ್ಲ ನ್ಯಾಯ ಬೇಕೆಂದ ಪೋಷಕರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಕೊಲ್ಕತ್ತಾದ ಸೀಲ್ಡಾ ಸಿವಿಲ್ ಮತ್ತು ಕ್ರಿಮಿನಲ್ ನ್ಯಾಯಾಲಯವು ಆರೋಪಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಹಾಗೇ, ಮೃತ ವೈದ್ಯೆಯ ಪೋಷಕರಿಗೆ ಸರ್ಕಾರ 10 ಲಕ್ಷ ಮತ್ತು 7 ಲಕ್ಷ ಪರಿಹಾರ ನೀಡಬೇಕೆಂದೂ ಸೂಚಿಸಿದೆ. ಆದರೆ, ಕೋರ್ಟ್​ನ ತೀರ್ಪು ಕೇಳಿ ಕಣ್ಣೀರಿಟ್ಟ ಮೃತ ಯುವತಿಯ ಪೋಷಕರು, “ನಮಗೆ ಪರಿಹಾರ ಬೇಡ, ನಮಗೆ ನ್ಯಾಯ ಬೇಕು” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು ನಿಮಗಾದ ನಷ್ಟವನ್ನು ನಾವು ಹಣದಿಂದ ಅಳೆಯುತ್ತಿಲ್ಲ. ಸರ್ಕಾರಿ ಆಸ್ಪತ್ರೆಯ ವೈದ್ಯೆಗೆ ಭದ್ರತೆ ಒದಗಿಸಬೇಕಾಗಿದ್ದುದು ಸರ್ಕಾರದ ಕರ್ತವ್ಯ. ಹೀಗಾಗಿ, ಸರ್ಕಾರಕ್ಕೆ ನಾವು ವಿಧಿಸಿರುವ ದಂಡವಿದು ಎಂದು ಹೇಳಿದೆ.

ಆರ್‌ಜಿ ಕರ್ ಪ್ರಕರಣದಲ್ಲಿ ಇಂದು ಸೀಲ್ಡಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶ ಅನಿರ್ಬನ್ ದಾಸ್ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಇದರೊಂದಿಗೆ 50,000 ರೂ. ದಂಡ ವಿಧಿಸಲಾಗಿದ್ದು, ಇನ್ನೂ 5 ತಿಂಗಳು ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದೆ.

ಮೃತ ವೈದ್ಯೆಯ ಕುಟುಂಬಕ್ಕೆ 10 ಲಕ್ಷ ರೂ. ಮತ್ತು 7 ಲಕ್ಷ ರೂ. ಪರಿಹಾರ ನೀಡುವಂತೆಯೂ ನ್ಯಾಯಾಲಯ ಆದೇಶಿಸಿದೆ. ಕರ್ತವ್ಯದಲ್ಲಿರುವಾಗ ಅತ್ಯಾಚಾರಕ್ಕೆ ಒಳಗಾಗಿದ್ದಕ್ಕೆ ಪಶ್ಚಿಮ ಬಂಗಾಳ ರಾಜ್ಯವು 7 ಲಕ್ಷ ರೂ. ಮತ್ತು ಕರ್ತವ್ಯದಲ್ಲಿರುವಾಗ ಸಾವನ್ನಪ್ಪಿದ್ದಕ್ಕೆ 10 ಲಕ್ಷ ರೂ. ಪರಿಹಾರವನ್ನು ಪಾವತಿಸಬೇಕಾಗುತ್ತದೆ ಎಂದು ಸೂಚಿಸಿದೆ.

ಇದನ್ನು ಕೇಳಿದ ಮೃತ ವೈದ್ಯೆಯ ಪೋಷಕರು, ‘ನನಗೆ ಪರಿಹಾರ ಬೇಡ’ ಎಂದು ಹೇಳಿದರು. ನಂತರ ನ್ಯಾಯಾಧೀಶರು, “ಸಾವು ಸಂಭವಿಸಿದ ರೀತಿಯನ್ನು ನೋಡಿದರೆ ಪರಿಹಾರದ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ. ನಾನು ನಿಮಗೆ ಹಣ ನೀಡುತ್ತಿದ್ದೇನೆ ಎಂದು ಭಾವಿಸಬೇಡಿ. ಆದರೆ ಭದ್ರತೆ ಒದಗಿಸುವುದು ರಾಜ್ಯದ ಜವಾಬ್ದಾರಿ. ಹೀಗಾಗಿ, ಇದು ದಂಡ.” ಎಂದಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!