ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಸೋಮವಾರ ದೆಹಲಿ ಕೋರ್ಟ್ ಹೆಚ್ಚಿನ ತನಿಖೆಗಾಗಿ ಮತ್ತೆ 12 ದಿನ ಎನ್ಐಎ ಕಸ್ಟಡಿಗೆ ನೀಡಿ ಆದೇಶಿಸಿದೆ.
ತಹವ್ವೂರ್ ರಾಣಾನ 18 ದಿನಗಳ NIA ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳು ಆರೋಪಿಯನ್ನು ಬಿಗಿ ಭದ್ರತೆಯ ನಡುವೆ NIA ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಅವರ ಮುಂದೆ ಹಾಜರುಪಡಿಸಿದರು.
ಮುಂಬೈ ದಾಳಿಯ ಉಗ್ರನ ವಿಚಾರಣೆ ನಡೆಸಿದ ಕೋರ್ಟ್, ಹೆಚ್ಚಿನ ತನಿಖೆಗಾಗಿ ರಾಣಾನನ್ನು ಮತ್ತೆ 12 ದಿನಗಳ ಕಾಲ ಎನ್ಐಎ ವಶಕ್ಕೆ ನೀಡಿದೆ.