ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾ (Jayalalithaa) ಅವರಿಗೆ ಸಂಬಂಧಿಸಿದ ಆಸ್ತಿಯನ್ನು ಹರಾಜು ಹಾಕಲು ಕೋರ್ಟ್ (Court) ಅನುಮತಿ ನೀಡಿದೆ.
ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪದ ಮೇಲೆ ದಾಳಿ ಮಾಡಿದ ಸಂದರ್ಭ ಸೀರೆಗಳು, ವಾಚ್ ಗಳು (Watch) ಹಾಗೂ ಚಿನ್ನಾಭರಣಗಳನ್ನ (Gold Properties) ವಶಪಡಿಸಿಕೊಳ್ಳಲಾಗಿತ್ತು. ಅವೆಲ್ಲವನ್ನೂ ಕರ್ನಾಟಕ ವಿಧಾನಸೌಧದ ಖಜಾನೆಯಲ್ಲಿ ಇರಿಸಲಾಗಿತ್ತು.
ಆದರೆ ಜಯಲಲಿತಾ ಅವರು ನಿಧನರಾದ ಬಳಿಕ ಆ ಆಸ್ತಿಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡುವಂತೆ ಆರ್ಟಿಐ ಕಾರ್ಯಕರ್ತ ಸಿಟಿ ಸಿವಿಲ್ ಕೋರ್ಟ್ (City Civil Court) ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದ್ದರು.
ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ ವಶಪಡಿಸಿಕೊಂಡ ವಸ್ತುಗಳನ್ನು ಮಾರಾಟ ಮಾಡಲು ಸೂಕ್ತವಾದ ಅಧಿಕಾರಿಯನ್ನು ನೇಮಿಸುವಂತೆ ಜೊತೆಗೆ ಬಂದ ಹಣದಲ್ಲಿ ಕರ್ನಾಟಕ ಸರ್ಕಾರ (Government Of Karnataka) ಖರ್ಚು ಮಾಡಿದ್ದ 5 ಕೋಟಿಯನ್ನು ತನ್ನಲ್ಲೇ ಇಟ್ಟುಕೊಂಡು ಉಳಿದ ಬಾಕಿ ಹಣವನ್ನು ತಮಿಳುನಾಡಿನ ಸರ್ಕಾರಕ್ಕೆ (TamilNadu Government) ನೀಡುವಂತೆ ಸೂಚನೆ ನೀಡಿದೆ.