ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಉನ್ನತಮಟ್ಟದ ಸಭೆ ನಡೆಯಲಿದೆ.
ವಾರಾಂತ್ಯ ಕರ್ಫ್ಯೂ, ರಾತ್ರಿ ಕರ್ಫ್ಯೂ ಕುರಿತ ನಿರ್ಬಂಧ ಸಡಿಲಿಕೆ ಬಗ್ಗೆ ಚರ್ಚೆ ನಡೆಸಿ, ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ. ಬಿಗಿಯಾದ ನಿರ್ಬಂಧಗಳನ್ನು ಸಡಿಲಿಸುವ ಕುರಿತು ಬೇಡಿಕೆಗಳು ಬರುತ್ತವೆ, ಈ ಬಗ್ಗೆ ಚರ್ಚೆ ನಡೆಯಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.