ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ 15 ದಿನಗಳಿಂದ ದೇಶಾದ್ಯಂತ ಕೋವಿಡ್ ಉಪತಳಿ ಜೆಎನ್.1 ತಳಿಯ ಹೆಚ್ಚುತ್ತಿದ್ದು, ಇದೀಗ ರಾಜ್ಯದ 35 ಜನರಲ್ಲಿ ಈ ಹೊಸ ಉಪತಳಿ ಮತ್ತೆಯಾಗಿದ್ದು, ಇದರಲ್ಲಿ ಬೆಂಗಳೂರಿನಲ್ಲಿಯೇ 20 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲದ ನೀಡಿದ ಮಾಹಿತಿಯಲ್ಲಿ ಒಟ್ಟು 63 ಜೆಎನ್.1 ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಯನ್ನು ಬಿಡುಗಡೆ ಮಾಡಿತ್ತು. ಆದರೆ, ಪುನಃ ರಾಜ್ಯ ಸರ್ಕಾರಕ್ಕೆ ಕಳುಹಿಸಲಾದ ವರದಿಯಲ್ಲಿ ಕರ್ನಾಟಕದಲ್ಲಿಯೇ ಒಟ್ಟು 35 JN.1 ಕೇಸ್ ಪತ್ತೆಯಾಗಿವೆ ಎಂದು ಮಾಹಿತಿ ನೀಡಿದೆ.
ಈ ಪೈಕಿ ಬೆಂಗಳೂರಿನಲ್ಲಿಯೇ ಬರೋಬ್ಬರಿ 20 ಜೆಎನ್1 ಕೇಸ್ ಪತ್ತೆಯಾಗಿವೆ. ಉಳಿದಂತೆ ಮೈಸೂರು 4, ಮಂಡ್ಯ 3, ರಾಮನಗರ, ಬೆಂಗಳೂರು ಗ್ರಾಮಾಂತರ, ಕೊಡಗು ಹಾಗೂ ಚಾಮರಾಜನಗರದಲ್ಲಿ ಜಿಲ್ಲೆಗಳಲ್ಲಿ ತಲಾ ಒಂದೊಂದು ಜೆಎನ್.1 ಉಪತಳಿ ಸೋಂಕಿತರು ಪತ್ತೆಯಾಗಿದ್ದಾರೆ.