ಕೋವಿಡ್ ಉಲ್ಬಣ: ಇಂದು ಕೇಂದ್ರ ಆರೋಗ್ಯ ಸಚಿವರಿಂದ ಪರಿಶೀಲನಾ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿವೆ, ಈ ಬಗ್ಗೆ ಯಾವ ರೀತಿ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಯಲು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಇಂದು ಪರಿಶೀಲನಾ ಸಭೆ ನಡೆಸಲಿದ್ದಾರೆ.

ಆರೋಗ್ಯ ಸೌಲಭ್ಯಗಳು, ಸೇವೆಗಳ ಪರಿಶೀಲನಾ ಸಿದ್ಧತೆ ಸಭೆಯನ್ನು ನಡೆಸಲಾಗುತ್ತಿದ್ದು, ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರು, ಕೇಂದ್ರಾಡಳಿತ ಪ್ರದೇಶಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಭಾರತದಲ್ಲಿ ಉಸಿರಾಟದ ಕಾಯಿಲೆಯ ಪ್ರಕರಣಗಳು ಹಾಗೂ ಕೋವಿಡ್ ಏರಿಕೆಯಾಗುತ್ತಿದೆ. ಈ ಬಗ್ಗೆ ಸೂಕ್ಷ್ಮವಾಗಿ ಕ್ರಮಗಳನ್ನು ಕೈಗೊಳ್ಳಬೇಕಿದೆ. ಜನರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಈ ಎಲ್ಲ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!