ಹಸು ಕೆಚ್ಚಲು ಕತ್ತರಿಸಿದ ಪ್ರಕರಣ: ಪ್ರಾಣಿ ಕಲ್ಯಾಣಕ್ಕೆ ಬಿಬಿಎಂಪಿಯಿಂದ ಸಹಾಯವಾಣಿ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕತ್ತರಿಸಿ ತೀವ್ರವಾಗಿ ಗಾಯಗೊಳಿಸಿದ ಘಟನೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಎಚ್ಚೆತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪಶುಸಂಗೋಪನಾ ಇಲಾಖೆಯು 1533 ಸಹಾಯವಾಣಿಯ ಮೂಲಕ ಪ್ರಾಣಿ ಕಲ್ಯಾಣ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಕ್ರಮ ತೆಗೆದುಕೊಂಡಿದೆ ಎಂದು ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್ ಅವರು ಕಿಶೋರ್ ತಿಳಿಸಿದ್ದಾರೆ.

ಭಾನುವಾರದ ಘಟನೆಯ ನಂತರ, ಸಂಬಂಧಪಟ್ಟ ನಾಗರಿಕರು ಮತ್ತು ಕಾರ್ಯಕರ್ತರು ವಾಟ್ಸಾಪ್, ಫೇಸ್‌ಬುಕ್ ಗುಂಪುಗಳು, ಸಹಾಯಕ ನಿರ್ದೇಶಕರಿಗೆ ವೈಯಕ್ತಿಕ ಫೋನ್ ಕರೆಗಳು ಮತ್ತು ಇಮೇಲ್‌ಗಳ ಮೂಲಕ ಪ್ರಾಣಿ ಕಲ್ಯಾಣಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಎತ್ತಿದ್ದರು ಮತ್ತು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಹೀಗಾಗಿ ಬಿಬಿಎಂಪಿ ಸಮಸ್ಯೆ ಪರಿಹರಿಸಲು ಸಹಾಯವಾಣಿ ಆರಂಭಿಸಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!