ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯಾ ಮೈತ್ರಿಕೂಟದಲ್ಲಿ ಭಿನ್ನಾಭಿಪ್ರಾಯ ಮತ್ತೆ ಮುಂದುವರಿದಿದ್ದು, ಕಾಂಗ್ರೆಸ್ ಪಕ್ಷದ ಗುಜರಾತ್ ಘಟಕವು ಆಮ್ ಆದ್ಮಿ ಪಕ್ಷ(ಎಎಪಿ) ಜೊತೆಗೆ ಮೈತ್ರಿ ಮುರಿದುಕೊಂಡಿದೆ.
ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿನ್ಹ ಗೋಹಿಲ್ ಅವರು, ಮುಂಬರುವ ವಿಸಾವದರ್ ಮತ್ತು ಕಾಡಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.
ಎಎಪಿ, ಕಾಂಗ್ರೆಸ್ ಅನ್ನು ಸಂಪರ್ಕಿಸದೆ ಏಕಪಕ್ಷೀಯವಾಗಿ ಗೋಪಾಲ್ ಇಟಾಲಿಯಾ ಅವರನ್ನು ವಿಸಾವದರ್ ಸ್ಥಾನಕ್ಕೆ ತನ್ನ ಅಭ್ಯರ್ಥಿ ಎಂದು ಘೋಷಿಸಿದ್ದು, ಇದು ಕಾಂಗ್ರೆಸ್ ಮತ್ತು ಎಎಪಿ ನಡುವೆ ಬಿರುಕಿಗೆ ಕಾರಣ ಎನ್ನಲಾಗಿದೆ.
ಗುಜರಾತ್ನಲ್ಲಿ ಎಎಪಿ ಜೊತೆ ಯಾವುದೇ ಮೈತ್ರಿ ಇಲ್ಲ – ಮುಂಬರುವ ಉಪಚುನಾವಣೆಗಳಿಗೂ ಅಲ್ಲ, ಸಾರ್ವತ್ರಿಕ ಚುನಾವಣೆಗೂ ಅಲ್ಲ ಎಂದು ಗೋಹಿಲ್ ಪ್ರತಿಪಾದಿಸಿದರು.