ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೋಶಿಮಠದಲ್ಲಿ ಮನೆ, ದೇವಾಲಯಗಳು ಧರೆಗೆ ಉರುಳುತ್ತಿವೆ, ಇದರ ಬೆನ್ನಲ್ಲೇ ಉತ್ತರ ಪ್ರದೇಶದ ಅಲಿಗಢದ ಕನ್ವರಿಗಂಜ್ ಪ್ರದೇಶದ ಕೆಲ ಮನೆಗಳು ಗೋಡೆಗಳಲ್ಲಿ ಬಿರುಕು ಕಾಣಿಸಿದೆ.
ಕೆಲ ದಿನಗಳಿಂದ ಬಿರುಕು ಕಾಣಿಸಿದ್ದು ಆತಂಕಗೊಂಡ ಸ್ಥಳೀಯರು ನಗರಸಭೆಗೆ ದೂರು ನೀಡಿದ್ದಾರೆ. ಆದರೆ ಈವರೆಗೂ ಯಾರು ಕ್ರಮ ಕೈಗೊಂಡಿಲ್ಲ, ಬರೀ ಭರವಸೆ ನೀಡಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.
ಮನೆಗಳು ಉರುಳಿ ಸಾವು ನೋವು ಸಂಭವಿಸುವ ಮುನ್ನ ಸೂಕ್ತ ಕ್ರಮ ಕೈಗೊಳ್ಳಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆ ಅನ್ವಯ ಪೈಪ್ಲೈನ್ ಅಳವಡಿಕೆ ಮಾಡಲಾಗಿದೆ. ಅಲ್ಲಿ ಸೋರಿಕೆಯಾಗುತ್ತಿರುವುದು ಮನೆಗಳಲ್ಲಿ ಬಿರುಕು ಬರಲು ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.