ಕರ್ಣಪ್ರಯಾಗ್‌ನಲ್ಲಿ 50ಕ್ಕೂ ಹೆಚ್ಚು ಮನೆಗಳಲ್ಲಿ ಬಿರುಕು: ಅಧ್ಯಯನಕ್ಕೆ ಸಮಿತಿ ರಚಿಸಿದ ಕೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಾಖಂಡದ ಜೋಶಿಮಠದಲ್ಲಿ ಮನೆಗಳು, ದೇವಾಲಯಗಳು ಕುಸಿಯುತ್ತಿವೆ, ಈ ಬೆನ್ನಲ್ಲೇ ಕರ್ಣಪ್ರಯಾಗ್‌ನಲ್ಲಿ ಇದೇ ರೀತಿ ಪ್ರಕರಣಗಳು ವರದಿಯಾಗಿದ್ದು, ಐವತ್ತಕ್ಕೂ ಹೆಚ್ಚು ಮನೆಗಳಲ್ಲಿ ಬಿರುಕು ಕಾಣಿಸಿದೆ.

ತಜ್ಞ ಭೂವಿಜ್ಞಾನಿಗಳ ತಂಡ ಜೋಶಿಮಠದಲ್ಲಿ ಭೂ ಮುಳುಗಡೆ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿದೆ. ಜೋಶಿಮಠದಲ್ಲಿ ಎನ್‌ಡಿಆರ್‌ಎಫ್ ತಂಡ ನಿಯೋಜಿಸಲು ಸೂಚನೆ ನೀಡಲಾಗಿದೆ.

ಕರ್ಣಪ್ರಯಾಗವು ಜೋಶಿಮಠದಿಂದ 80 ಕಿ.ಮೀ ದೂರದಲ್ಲಿದೆ. ಇಲ್ಲಯೂ ಭೂಮಿ ಕುಸಿತ ಆಗುತ್ತಿರುವುದಕ್ಕೆ ಕಾರಣವೇನು ಎಂದು ತಜ್ಞರ ತಂಡ ಮಾಹಿತಿ ಕಲೆಹಾಕುತ್ತಿದೆ. ಕರ್ಣಪ್ರಯಾಗದ ಸಬ್ಜಿ ಮಂಡಿಯ ಮೇಲ್ಭಾಗದಲ್ಲಿ ವಾಸಿಸುವ 5೦ಕ್ಕೂ ಹೆಚ್ಚು ಕುಟುಂಬಗಳು ಭೂಕುಸಿತದ ಭೀತಿ ಎದುರಿಸುತ್ತಿವೆ.

ಜೋಶಿಮಠದಲ್ಲಿ ಭೂಕುಸಿತದ ಕುರಿತು ಅಧ್ಯಯನ ನಡೆಸಲು ಕೇಂದ್ರ ಸಮಿತಿ ರಚಿಸಿದ್ದು, ಶೀಘ್ರವೇ ಕಾರಣ ತಿಳಿಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!