ನನ್ನ ವಿರುದ್ಧ ಅನಗತ್ಯ ಗೊಂದಲ ಸೃಷ್ಟಿಸಿದ್ದಾರೆ: ಮಾಜಿ ಸಿಎಂ ಯಡಿಯೂರಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮ್ಮ ವಿರುದ್ಧ ನಡೆಯುತ್ತಿರುವ ಪೋಕ್ಸೋ ಪ್ರಕರಣವು ಅನಗತ್ಯ ಗೊಂದಲ ಉಂಟುಮಾಡಿದೆ ಎಂದು ಹೈಕೋರ್ಟ್ ಜಾಮೀನು ರಹಿತ ವಾರೆಂಟ್‌ಗೆ ತಡೆ ನೀಡಿದ ಒಂದು ದಿನದ ನಂತರ ಶನಿವಾರ ಬೆಂಗಳೂರಿಗೆ ಹಿಂತಿರುಗಿದ ಕರ್ನಾಟಕ ಬಿಜೆಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು.

ಇಂದು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಿಗದಿತ ಕಾರ್ಯಕ್ರಮದ ಅಂಗವಾಗಿ ನಾನು ದೆಹಲಿಗೆ ಹೋಗಿದ್ದೆ, ಇದೇ ತಿಂಗಳ 17 ರಂದು ವಿಚಾರಣೆಗೆ ಬರುವುದಾಗಿ ಈಗಾಗಲೇ ತಿಳಿಸಿದ್ದೇನೆ. ಹೈಕೋರ್ಟ್ ಕೂಡ ಹೇಳಿದೆ. ಸೋಮವಾರ ವಿಚಾರಣೆಗೆ ಹೋಗುತ್ತಿದ್ದೇನೆ ಎಂದು ಆದೇಶ ಹೊರಡಿಸಿ ಅನಗತ್ಯ ಗೊಂದಲ ಮೂಡಿಸುವ ಕೆಲಸ ಮಾಡಿದ್ದಾರೆ.

ನಾನು ಯಾರನ್ನೂ ದೂರುವುದಿಲ್ಲ, ಕಾಲವೇ ಎಲ್ಲವನ್ನೂ ನಿರ್ಧರಿಸುತ್ತದೆ, ಸತ್ಯ ಏನೆಂದು ಜನರಿಗೆ ತಿಳಿದಿದೆ, ಕುತಂತ್ರ ಮಾಡುವವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ. ಎಂದು ಹೇಳಿದ್ದಾರೆ.

ಎಲ್ಲರಿಗೂ ಎಲ್ಲವೂ ತಿಳಿದಿದೆ ಮತ್ತು ನನಗೆ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ. ನನಗೆ ನ್ಯಾಯ ಸಿಗುತ್ತದೆ. ನಾನು ಜೂನ್ 17 ರಂದು ನ್ಯಾಯಾಲಯದ ಮುಂದೆ ಹಾಜರಾಗುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಇಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!