ಹೃದಯಗಳನ್ನು ಗೆದ್ದ ಸೃಜನಶೀಲ ಪ್ರತಿಭೆ : ಬಾಲಿವುಡ್‌ ನಟನ ನಿಧನಕ್ಕೆ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಾಲಿವುಡ್‌ ಹಿರಿಯ ನಟ ಮತ್ತು ನಿರ್ದೇಶಕ ಸತೀಶ್ ಕೌಶಿಕ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, “ಅವರು ಹೃದಯಗಳನ್ನು ಗೆದ್ದ ಸೃಜನಶೀಲ ಪ್ರತಿಭೆ” ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಟ್ವಿಟ್ಟರ್‌ ಖಾತೆಯಲ್ಲಿ,“ಪ್ರಸಿದ್ಧ ಚಲನಚಿತ್ರ ನಟ ಶ್ರೀ ಸತೀಶ್ ಕೌಶಿಕ್ ಜಿ ಅವರ ಅಕಾಲಿಕ ನಿಧನದಿಂದ ನೋವಾಗಿದೆ. ಅವರು ತಮ್ಮ ಅದ್ಭುತ ನಟನೆ ಮತ್ತು ನಿರ್ದೇಶನಕ್ಕಾಗಿ ಹೃದಯಗಳನ್ನು ಗೆದ್ದ ಸೃಜನಶೀಲ ಪ್ರತಿಭೆ. ಅವರ ಕೃತಿಗಳು ಪ್ರೇಕ್ಷಕರನ್ನು ರಂಜಿಸುತ್ತಲೇ ಇರುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಟ್ವೀಟ್ ಮಾಡಿದ್ದಾರೆ.

ಹೆಸರಾಂತ ನಟ ಸತೀಶ್ ಕೌಶಿಕ್ ಬುಧವಾರ ತಡರಾತ್ರಿ ಹೃದಯಾಘಾತದಿಂದ 66 ನೇ ವಯಸ್ಸಿನಲ್ಲಿ ನಿಧನರಾದರು. ಅವರ ನಿಧನದ ಸುದ್ದಿಯನ್ನು ಹಿರಿಯ ನಟ ಅನುಪಮ್ ಖೇರ್‌ ಇಂದು ಬೆಳಗ್ಗೆ ಟ್ವಿಟ್ಟರ್‌ ನಲ್ಲಿ ಖಚಿತಪಡಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!