ಹೊಸದಿಗಂತ ಡಿಜಿಟಲ್ ಡೆಸ್ಕ್
ಆರ್ಥಿಕ ಸಂಕಷ್ಠದಲ್ಲಿ ಸಿಲುಕಿರುವ ಶ್ರೀಲಂಕಾಕ್ಕೆ ಈಗಾಗಲೇ ಭಾರತ ನೆರವಿನ ಹಸ್ತ ನೀಡುತ್ತಿಸ್ಸು, ಈ ಹಿನ್ನೆಲೆ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಜಿ ಕ್ರಿಕೆಟಿಗ ಜಯಸೂರ್ಯ ಕೃತಜ್ಞತೆ ಸಲ್ಲಿಸಿದ್ದಾರೆ.
ಭಾರತ ಇದುವರೆಗೆ ಶ್ರೀಲಂಕಾಗೆ 2,70,000 ಮೆಟ್ರಿಕ್ ಟನ್(ಎಂಟಿ) ಇಂಧನವನ್ನು ಪೂರೈಸಿದೆ. ಕಳೆದ 24 ಗಂಟೆಗಳಲ್ಲಿ ಭಾರತ 36,000 ಎಂಟಿ ಪೆಟ್ರೋಲ್ ಹಾಗೂ 40,000 ಎಂಟಿ ಡೀಸೆಲ್ ರವಾನಿಸಿದೆ. ಇದರೊಂದಿಗೆ ಔಷಧ, ಧಾನ್ಯ, ಅಕ್ಕಿಯನ್ನೂ ಕಳುಹಿಸಿದೆ.
ಈ ಸಹಾಯಕ್ಕಾಗಿ ಜಯಸೂರ್ಯ ಭಾರತ ಶ್ರೀಲಂಕಾದ ಬಿಗ್ ಬ್ರದರ್'(ದೊಡ್ಡ ಅಣ್ಣ). ನೆರೆಯ ದೇಶವಾಗಿ ಹಾಗೂ ನಮ್ಮ ದೇಶದ ಹಿರಿಯ ಸಹೋದರನಾಗಿ, ಭಾರತ ಯಾವಾಗಲೂ ನಮಗೆ ಸಹಾಯ ಮಾಡಿದೆ. ನಾವು ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿಯವರಿಗೆ ಕೃತಜ್ಞರಾಗಿರುತ್ತೇವೆ. ಪ್ರಸ್ತುತ ಸನ್ನಿವೇಶದಲ್ಲಿ ನಮ್ಮ ಬದುಕು ಕಷ್ಟಕರವಾಗಿದೆ. ಭಾರತ ಹಾಗೂ ಇತರ ದೇಶಗಳ ಸಹಾಯದಿಂದ ನಾವು ಈ ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಆಶಿಸುತ್ತೇವೆ ಎಂದರು.