ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿಯೊಂದಿಗೆ ಮಂಗಳವಾರ (ಫೆಬ್ರವರಿ 21)ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ದರುಶನ ಪಡೆದರು.
ಈ ಕುರಿತು ಟ್ವಿಟರ್ನಲ್ಲಿ ಸೂರ್ಯಕುಮಾರ್ ಯಾದವ್ ಫೋಟೋ ಹಂಚಿಕೊಂಡಿದ್ದಾರೆ.
ಬಾಲಾಜಿಯ ದರುಶನ ಪಡೆದ ನಂತರ ತಿರುಮಲದ ರಂಗನಾಯಕ ಮಂಟಪದಲ್ಲಿ ವೈದಿಕರು ಆಶೀರ್ವಚನ ನೀಡಿದರು. ಬಳಿಕ ದೇಗುಲದ ಅಧಿಕಾರಿಗಳು ಸೂರ್ಯಕುಮಾರ್ ಯಾದವ್ ದಂಪತಿಗೆ ರೇಷ್ಮೆ ವಸ್ತ್ರವನ್ನು ನೀಡಿ ಗೌರವಿಸಿದರು.
ಈ ಹಿಂದೆ ಭಾರತ ತಂಡ ತಿರುವನಂತಪುರಂಗೆ ಹೋದಾಗಲೂ ಅನಂತ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ದಂಪತಿ ತೆರಳಿ ಪೂಜೆ ಸಲ್ಲಿಸಿದ್ದರು.