ಇನ್ಮುಂದೆ ವೃದ್ಧಾಶ್ರಮಕ್ಕೆ ತಂದೆ-ತಾಯಿ ಸೇರಿಸಿದ್ರೆ ಕ್ರಿಮಿನಲ್ ಕೇಸ್: ಪೊಲೀಸರಿಂದ ಖಡಕ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದಲ್ಲಿ ಇನ್ಮುಂದೆ ವೃದ್ಧಾಶ್ರಮಕ್ಕೆ ತಂದೆ-ತಾಯಿಗಳನ್ನು ಸೇರಿಸಿದ್ರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಬೆಂಗಳೂರು ನಗರ ಪೊಲೀಸರು ಖಡಕ್ ಸೂಚನೆ ನೀಡಿದ್ದಾರೆ.

ಜೊತೆಗೆ ಈಗಾಗಲೇ ವೃದ್ಧಾಶ್ರಮಕ್ಕೆ ಸೇರಿಸಿರೋ ತಂದೆ-ತಾಯಿಗಳನ್ನು ಕರೆದೊಯ್ಯುವಂತೆಯೂ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ವೃದ್ಧಾಶ್ರಮಕ್ಕೆ ತಂದೆ-ತಾಯಿಗಳನ್ನು ಸೇರಿಸಿದ್ರೆ ಅಂಥವರ ವಿರುದ್ಧ ಕ್ರಿಮನಲ್ ಕೇಸ್ ಬುಕ್ ಮಾಡೋದಕ್ಕೆ ತಯಾರಿ ನಡೆಸಿದ್ದಾರೆ.ಈಗಾಗಲೇ ಈ ಸಂಬಂಧ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ. ಅವರ ಸೂಚನೆಯ ಮೇರೆಗೆ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕೋದಕ್ಕೆ ಮುಂದಾಗಿದ್ದಾರೆ.

ಬೆಂಗಳೂರಿನ ವೃದ್ಧಾಶ್ರಮಗಳಲ್ಲಿ ತಮ್ಮ ತಂದೆ-ತಾಯಿಗಳನ್ನು ಮನೆಗೆ ಕರೆದೊಯ್ಯಬೇಕು. ಇಲ್ಲವಾದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸೋ ಎಚ್ಚರಿಕೆಯನ್ನು ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!