ಹೊಸದಿಗಂತ ವರದಿ ಮಡಿಕೇರಿ:
ಬೆಳೆ ಪರಿಹಾರ ವಿತರಣೆ ಸಂಬಂಧ ಕೊಡಗು ಜಿಲ್ಲೆಗೆ ಹೆಚ್ಚುವರಿಯಾಗಿ 6 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಇನ್ನು ಎರಡು-ಮೂರು ದಿನದಲ್ಲಿ ಎರಡು ಸಾವಿರ ರೈತರಿಗೆ ಪರಿಹಾರ ದೊರೆಯಲಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 45 ಸಾವಿರ ಕೃಷಿಕರಿಗೆ 133 ಕೋಟಿ ರೂ. ಬೆಳೆ ಪರಿಹಾರ ವಿತರಿಸಲಾಗಿದೆ ಎಂದು ಬೋಪಯ್ಯ ಮಾಹಿತಿ ನೀಡಿದ್ದಾರೆ.