ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆಯಲ್ಲಿ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ.
ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಜನಸಂದಣಿ ನಿಯಂತ್ರಣ ವಿಧೇಯಕ ಮಂಡಿಸಿದರು. ಜನಸಂದಣಿ ನಿಯಂತ್ರಣ ಮಾಡಲು ಸರ್ಕಾರದಿಂದ ಕಾನೂನು ರೂಪಿಸಲು ಈ ಮಸೂದೆಯನ್ನು ಮಂಡಿಸಲಾಗಿತ್ತು. ಆರ್ ಸಿ ಬಿ ಘಟನೆ ಬಳಿಕ ಸರ್ಕಾರ ಎಚ್ಚೆತ್ತು ಈ ಕಾನೂನು ರೂಪಿಸಲಾಗಿತ್ತು.
ಸಾರ್ವಜನಿಕ ಸ್ಥಳಗಳಲ್ಲಿ 7 ಸಾವಿರಕ್ಕಿಂತ ಕಡಿಮೆ ಜನ ಸೇರುವುದಾದರೆ ಠಾಣೆಯಿಂದ ಅನುಮತಿ ಪಡೆಯಬೇಕು. 7-50 ಸಾವಿರದೊಳಗೆ ಜನ ಸೇರಿದ್ರೆ ಡಿವೈಎಸ್ ಪಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.