ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾಶಿವರಾತ್ರಿ ದಿನದಂದು ಬೆಂಗಳೂರಿನ ಕಾಡುಮಲ್ಲೇಶ್ವರ ದೇಗುಲದಲ್ಲಿ ಶಿವನಿಗೆ ಸಂಪೂರ್ಣ ಹೂವಿನ ಅಲಂಕಾರ ಮಾಡಲಾಗುತ್ತದೆ.
ಇತಿಹಾಸ ಪ್ರಸಿದ್ಧ ದೇಗುಲಕ್ಕೆ ಶಿವ ದೇವರ ದರುಶನಕ್ಕೆ ಸಾಕಷ್ಟು ಭಕ್ತರು ಆಗಮಿಸುತ್ತಾರೆ. ಇಡೀ ದೇಗುಲವನ್ನು ಸಂಪೂರ್ಣ ಹೂವಿನಿಂದ ಅಲಂಕಾರ ಮಾಡಿದ್ದು, ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರುಶನ ಪಡೆಯುತ್ತಿದ್ದಾರೆ. ಬೆಳಗಿನ ಜಾವದಿಂದಲೇ ಭಕ್ತರು ಕ್ಯೂನಲ್ಲಿ ನಿಂತ ದೃಶ್ಯ ಸಾಮಾನ್ಯವಾಗಿತ್ತು.