ಬೆಂಗಳೂರಿನ ದೇವಸ್ಥಾನಗಳಲ್ಲಿ ಭಕ್ತರ ದಂಡು: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಶುಕ್ರವಾರ ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ. ಪ್ರಮುಖವಾಗಿ, ಬೆಂಗಳೂರಿನ ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ ಮತ್ತು ಇಸ್ಕಾನ್ ದೇವಸ್ಥಾನಕ್ಕೆ ಸಹಸ್ರಾರು ಭಕ್ತರು ನಸುಕಿನ ಜಾವದಿಂದಲೇ ಭೇಟಿ ನೀಡುತ್ತಿದ್ದಾರೆ. ಇದರಿಂದ, ದೇವಸ್ಥಾನದ ಅಕ್ಕ-ಪಕ್ಕದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಿಷೇಧಿಸಲಾಗಿದೆ.

ಕೆ.ಆ‌ರ್.ಪುರ ಮತ್ತು ಪೊಲೀಸ್ ಠಾಣೆ ರಸ್ತೆ, ರಾಮಮೂರ್ತಿನಗರ ಮುಖ್ಯರಸ್ತೆಯಿಂದ ಕಲ್ಕೆರೆ ಕಡೆಗೆ ಹೋಗುವ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಕೆ.ಆರ್.ಪುರ ಗ್ರಾಮದ ಒಳಗೆ ಹೋಗುವ ವಾಹನ ಸವಾರರು ಜಿ.ಆರ್.ಟಿ. ಕ್ರಾಸ್ ಮತ್ತು ಸರ್ಕಾರಿ ಕಾಲೇಜ್ ರಸ್ತೆ ಮೂಲಕ ಸಂಚರಿಸಬಹುದಾಗಿದೆ. ಕಲ್ಕೆರೆ ಕಡೆ ಹೋಗುವ ಮತ್ತು ಬರುವ ವಾಹನ ಸವಾರರು ರಾಮಮೂರ್ತಿನಗರ ಹಳೆ ಪೋಸ್ಟ್ ಆಫೀಸ್ ರಸ್ತೆ ಮೂಲಕ ಸಂಚರಿಸಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!