ಛತ್ತೀಸ್ʼಗಢದಲ್ಲಿ ಗುಂಡಿನ ದಾಳಿ: ಸಿಆರ್ʼಪಿಎಫ್‌ ಯೋಧ ಹುತಾತ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ಒಬ್ಬ ಸಿಆರ್‌ ಪಿಎಫ್‌ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್‌ ಅಧಿಕಾರಿ ಸುಂದರ್‌ ರಾಜ್‌, ಬೆಳಗ್ಗೆ 9:30ರ ವೇಳೆಗೆ ಪುಟ್ಕೆಲ್‌ ಪ್ರದೇಶದ ಬಳಿ ಈ ಘಟನೆ ನಡೆದಿದೆ. ರಾಜಧಾನಿ ರಾಯ್‌ ಪುರದಿಂದ ಸುಮಾರು 450 ಕಿ.ಮೀ ದೂರದಲ್ಲಿರುವ ಡೊಂಗಲ್‌ ಚಿಂತಾ ನದಿ ಬಳಿ ಸಿಆರ್‌ ಪಿಎಫ್‌ ಗಸ್ತು ತಿರುಗುತ್ತಿದ್ದ ವೇಳೆ ಈ ಗುಂಡಿನ ದಾಳಿ ನಡೆಸಲಾಗಿದೆ ಎಂದರು.

ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಯೋಧನನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ಇದೇ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಮತ್ತೋರ್ವ ಯೋಧ ಗಾಯಗೊಂಡಿದ್ದಾರೆ ಎಂದು ಎಎನ್‌ ಐ ವರದಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!