ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಅವರ ತಂದೆ ತಿಮ್ಮೇಗೌಡ (92) ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅರನ್ನು ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ನಾಳೆ ಸಿ.ಟಿ.ರವಿ ಅವರ ಸ್ವಗ್ರಾಮ ಚಿಕ್ಕಮಾಗರಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ತಂದೆ ಇಲ್ಲದ ಕ್ಷಣದ ಬಗ್ಗೆ ಭಾವುಕರಾಗಿ ಟ್ವೀಟ್ ಮಾಡಿದ ಶಾಸಕ ಸಿ.ಟಿ. ರವಿ, ನನ್ನಾತ್ಮಬಲದ ಭಾಗವೊಂದು ಇಂದು ನನ್ನನ್ನಗಲಿದೆ. ಮೊದಲ ಬಾರಿಗೆ ಅಪ್ಪನಿಲ್ಲದೆ ಲೋಕವನ್ನು ನಾನೆದುರಿಸಬೇಕಾಗಿದೆ. ಓಂಶಾಂತಿ ಅಣ್ಣ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
ನನ್ನಾತ್ಮಬಲದ ಭಾಗವೊಂದು ಇಂದು ನನ್ನನ್ನಗಲಿದೆ.
ಮೊದಲ ಬಾರಿಗೆ ಅಪ್ಪನಿಲ್ಲದೆ ಲೋಕವನ್ನು ನಾನೆದುರಿಸಬೇಕಾಗಿದೆ.
ಓಂಶಾಂತಿ ಅಣ್ಣ.
— C T Ravi 🇮🇳 ಸಿ ಟಿ ರವಿ (@CTRavi_BJP) January 29, 2022