ಕರ್ಫ್ಯೂ ಸಡಿಲಿಕೆ: ಮತ್ತೆ ಸಹಜ ಸ್ಥಿತಿಯತ್ತ ಮರಳುತ್ತಿದೆ ಕನ್ಹಯ್ಯ ಲಾಲ್ ಊರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಟೈಲರ್‌ ಹಿಂದು ವ್ಯಕ್ತಿ ಶಿರಚ್ಛೇದ ಘಟನೆ ಬಳಿಕ ಉದಯಪುರದಲ್ಲಿ ಉಂಟಾದ ಉದ್ವಿಗ್ನ ಪರಿಸ್ಥಿತಿಯನ್ನು ಶಾಂತಗೊಳಿಸಲು ಹೇರಲಾಗಿದ್ದ ಕರ್ಫ್ಯೂಯನ್ನು ಸಡಿಲಿಸಲಾಗಿದೆ.
ಹಿಂಸಾಚಾರದ ಘಟನೆಗಳ ನಂತರ ಉದಯಪುರದ ಏಳು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ವಿಧಿಸಲಾಗಿತ್ತು. ನಗರದಲ್ಲಿ ಪರಿಸ್ಥಿತಿ ಸಹಜವಾಗುತ್ತಿದ್ದು, ಹಾಗಾಗಿ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಕರ್ಫ್ಯೂ ಸಡಿಲಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದರಿಂದ ಮಾರುಕಟ್ಟೆಗಳು ತೆರೆದು ದಿನನಿತ್ಯದ ಚಟುವಟಿಕೆಗಳು ಪುನಾರಂಭಗೊಂಡಿವೆ. ಈ ಮೂಲಕ ನಗರದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.
ಟೈಲರ್​ನ್ನು ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!