ವಿದ್ಯುತ್ ಟ್ರಾನ್ಸ್ಫಾರ್ಮರ್ ದುರಸ್ತಿ ವೇಳೆ ಕರೆಂಟ್ ಶಾಕ್: ಲೈನ್​ಮ್ಯಾನ್ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ವಿದ್ಯುತ್ ಟ್ರಾನ್ಸ್ಫಾರ್ಮರ್ ದುರಸ್ತಿ ವೇಳೆ ಕರೆಂಟ್ ಶಾಕ್ ಹೊಡೆದು ಲೈನ್​ಮ್ಯಾನ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರದಲ್ಲಿ ನಡೆದಿದೆ.

32 ವರ್ಷದ ಗೌತಮ್ ಮೃತ. ಇವರು ಟ್ರಾನ್ಸ್ಫಾರ್ಮರ್ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯರ ಸಹಾಯದಿಂದ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇನ್ನು ತಮ್ಮ ಮಗನ ಸಾವಿಗೆ ಕೆಇಬಿಯೇ ನೇರ ಹೊಣೆ ಎಂದು ಮೃತನ ತಂದೆ ರಂಗಸ್ವಾಮಿ ದೂರಿದ್ದಾರೆ. ‘ನನ್ನ ಮಗನ ಸಾವಿಗೆ ಕೆಇಬಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್, ಜ್ಯೂನಿಯರ್ ಇಂಜಿನಿಯರ್​ಗಳೇ ಕಾರಣ. ಆತನನ್ನು ಕೊಲೆ ಮಾಡಲಾಗಿದೆ ಎಂದು ರಂಗಸ್ವಾಮಿ ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!