ಹೊಸದಿಗಂತ ಡಿಜಿಟಲ್ ಡೆಸ್ಕ್:
ತೈಲ ದರ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ರಸ್ತೆಗಿಳಿದಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಿಜೆಪಿ ಕಚೇರಿಯಿಂದ ವಿಧಾನಸೌಧದ ವರೆಗೆ ನಾಯಕರು ಸೈಕಲ್ ಜಾಥಾ ನಡೆಸಿದರು. ಆದರೆ ಇದಕ್ಕೆ ಅವಕಾಶ ಮಾಡಿಕೊಡದ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಬಿ.ವೈ. ವಿಜಯೇಂದ್ರ, ಅಶ್ವತ್ಥ್ ನಾರಾಯಣ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ 9:30 ಕ್ಕೆ ಬಿಜೆಪಿ ಕಚೇರಿಯಿಂದ ವಿಧಾನಸೌಧದ ವರೆಗೆ ಸೈಕಲ್ ಜಾಥಾ ಆರಂಭಿಸಲಾಯಿತು. ವಿಜಯೇಂದ್ರ ನೇತೃತ್ವದಲ್ಲಿ ಸೈಕಲ್ ಏರಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬಿಜೆಪಿ ನಾಯಕರು ಮುಂದಾದರು. ಆದರೆ ಬಿಜೆಪಿ ಕಚೇರಿ ಮುಂಭಾಗದಲ್ಲೇ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು.