ಬಿಪರ್‌ಜೋಯ್ ಚಂಡಮಾರುತಕ್ಕೆ ಸಿಕ್ಕಿ 22 ಮಂದಿಗೆ ಗಾಯ, ಅಂಧಕಾರದಲ್ಲಿ 940 ಹಳ್ಳಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಪರ್‌ಜೋಯ್ ಚಂಡಮಾರುತವು ಗುಜರಾತ್ ರಾಜ್ಯದ ಕರಾವಳಿಯನ್ನು ದಾಟಿದ್ದು, ಹಲವು ಗ್ರಾಮಗಳಲ್ಲಿ ತೀವ್ರ ಆಸ್ತಿ ಹಾನಿಯಾಗಿದೆ. ಗುಜರಾತ್‌ನ ಕರಾವಳಿ ಪ್ರದೇಶಗಳಲ್ಲಿ ಚಂಡಮಾರುತದಿಂದಾಗಿ ವಿದ್ಯುತ್ ಕಂಬಗಳು ಮತ್ತು ಮರಗಳು ನೆಲಕ್ಕುರುಳಿವೆ. ಚಂಡಮಾರುತದ ದುರಂತದಿಂದಾಗಿ 22 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಲವಾದ ಗಾಳಿಯಿಂದಾಗಿ ಗುಜರಾತ್ ರಾಜ್ಯದ ವಿವಿಧೆಡೆ 524 ಮರಗಳು ನೆಲಕ್ಕುರುಳಿವೆ. ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದರಿಂದ 940 ಗ್ರಾಮಗಳು ಕತ್ತಲಲ್ಲಿ ಮುಳುಗಿವೆ.

ಚಂಡಮಾರುತದ ಅಲೆಗಳು ಸೌರಾಷ್ಟ್ರ ಮತ್ತು ಕಚ್ ಕರಾವಳಿಗೆ ಅಪ್ಪಳಿಸಿದ್ದು ಭಾರೀ ಮಳೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಕರಾವಳಿಯ ಗ್ರಾಮಗಳ ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದ್ದು, ಪ್ರಾಣಹಾನಿ ತಪ್ಪಿಸಲಾಗಿದೆ. ಚಂಡಮಾರುತದಿಂದಾಗಿ 23 ಪ್ರಾಣಿಗಳು ಸಾವನ್ನಪ್ಪಿವೆ ಎಂದು ಗುಜರಾತ್ ಪುನರ್ವಸತಿ ಸಹಾಯಕ ಆಯುಕ್ತ ಅಲೋಕ್ ಸಿಂಗ್ ಹೇಳಿದ್ದಾರೆ. ಈ ಚಂಡಮಾರುತವು ಸೌರಾಷ್ಟ್ರ ಮತ್ತು ಕಚ್‌ನ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಿದ್ದರಿಂದ ಆ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಚಂಡಮಾರುತದಿಂದಾಗಿ 99 ರೈಲುಗಳನ್ನು ರದ್ದುಗೊಳಿಸಲಾಗಿದೆ. ದ್ವಾರಕಾ ಪಟ್ಟಣದಲ್ಲಿ ಹೋರ್ಡಿಂಗ್‌ಗಳು ಬಿದ್ದಿವೆ. ಈ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆಯಾಗುತ್ತಿದೆ ಎಂದು IMD ಅಧಿಕಾರಿಗಳು ತಿಳಿಸಿದ್ದಾರೆ. ಗಾಂಧಿನಗರದ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಭೆ ನಡೆಯಿತು. ಅತಿ ವೇಗದ ಗಾಳಿ, ಅಲೆಗಳು ಮತ್ತು ಭಾರೀ ಮಳೆಯಿಂದಾಗಿ, ತಾತ್ಕಾಲಿಕ ವಸತಿ ರಚನೆಗಳು ಭಾರೀ ಹಾನಿಯನ್ನು ಅನುಭವಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!