ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಬೆಳಗ್ಗೆಯಿಂದಲೇ ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯೂ ಬರಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಆರಂಭವಾದ ಮಾಂಡೂಸ್ ಚಂಡಮಾರುತ ಇಂದು ಮಧ್ಯರಾತ್ರಿಯಿಂದ ತಮಿಳುನಾಡು,ಪುದುಚೆರಿ ಹಾಗೂ ಆಂಧ್ರಪ್ರದೇಶದ ಶ್ರೀಹರಿಕೋಟ ತೀರ ಪ್ರದೇಶವನ್ನು ಹಾದುಹೋಗಲಿದೆ.
ಚಂಡಮಾರುತದ ಪರಿಣಾಮ ಡಿಸೆಂಬರ್ ೧೨ರವರೆಗೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಜತೆಗೆ ಕರಾವಳಿ, ಮಲೆನಾಡು ಭಾಗದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.