ಆಂಧ್ರದ ಕರಾವಳಿಗೆ ಅಪ್ಪಳಿಸಿದ ಮಿಚಾಂಗ್‌ ಚಂಡಮಾರುತ: ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಮಿಳುನಾಡಿನಲ್ಲಿ ತಲ್ಲಣ ಸೃಷ್ಟಿಸಿರುವ ಮಿಚಾಂಗ್ ಚಂಡಮಾರುತ ಈಗ ಆಂಧ್ರ ಪ್ರದೇಶದ ಕರಾವಳಿ ಮೇಲೆ ಪ್ರಭಾವ ಬೀರಿದೆ. ಆಂಧ್ರದ ಬಾಪಟ್ಲಾ ಕರಾವಳಿಗೆ ಚಂಡಮಾರುತ ಅಪ್ಪಳಿಸಿದ್ದು, ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.

ಬಂಗಾಳಕೊಲ್ಲಿಯಲ್ಲಿ ಸುತ್ತುತ್ತಿರುವ ಮಿಚಾಂಗ್‌ ಚಂಡಮಾರುತವು ಆಂಧ್ರ ಕರಾವಳಿಯತ್ತ ಸಾಗಿದ್ದು, ನೆಲ್ಲೂರು, ಮಚಲಿಪಟ್ಟಣಂ, ತಿರುಪತಿ, ಪಶ್ಚಿಮ ಗೋದಾವರಿ, ಕಾಕಿನಾಡ ಸೇರಿದಂತೆ ಹಲವು ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಅಲರ್ಟ್‌ ಘೋಷಿಸಿದೆ.

ಚಂಡಮಾರುತದಿಂದಾಗಿ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಡಿಸೆಂಬರ್ 7ರವರೆಗೂ ಸೈಕ್ಲೋನ್ ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಆಂಧ್ರ ಮುಖ್ಯಮಂತ್ರಿ ವೈ. ಎಸ್‌. ಜಗನ್‌ ಮೋಹನ್‌ ರೆಡ್ಡಿ ಅವರು ಪೂರ್ವಭಾವಿ ಸಭೆ ನಡೆಸಿದ್ದು, ಚಂಡಮಾರುತವನ್ನು ಎದುರಿಸಲು ಕೈಗೊಳ್ಳುವ ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!