ತಮಿಳುನಾಡಿನಲ್ಲಿ ಮಿಚಾಂಗ್‌ ಚಂಡಮಾರುತ ಆರ್ಭಟ: ಮೃತರ ಸಂಖ್ಯೆ 8ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಮಿಳುನಾಡಿನಲ್ಲಿ ಮಿಚಾಂಗ್‌ ಚಂಡಮಾರುತದ ಆರ್ಭಟ ಮಂಗಳವಾರವೂ ಮುಂದುವರಿದಿದೆ. ಭಾರೀ ಮಳೆ, ಗಾಳಿಯಿಂದ ಸಂಭವಿಸಿದ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಮಳೆ ಪ್ರಮಾಣ ಇಂದು ಕೊಂಚ ಕಡಿಮೆಯಾದ ಹಿನ್ನೆಲೆಯಲ್ಲಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನಗಳು ಹಾರಾಟ ನಡೆಸುತ್ತಿವೆ ಎಂದು ವರದಿಯಾಗಿದೆ.

ಇತ್ತ ಮುಖ್ಯಮಂತ್ರಿ ಸ್ಟಾಲಿನ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪರಿಹಾರ ಕ್ರಮಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!