ಒಡಿಶಾಕ್ಕೆ ಭೂಕುಸಿತದ ಆತಂಕ ಹೊತ್ತು ತಂದಿದೆ ಸೈಕ್ಲೋನ್ ‘ಮೋಚಾ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ವಾರದಲ್ಲಿ ವರ್ಷದ ಮೊದಲ ಚಂಡಮಾರುತ ಮೋಚಾ ಒಡಿಶಾಗೆ ಬಂದು ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕಕ್ಕೂ ಮೋಚಾ ಪ್ರಭಾವ ಬೀರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ಮೋಚಾದಿಂದ ಭೂಕುಸಿತ ಉಂಟಾಗುವ ಭೀತಿ ಒಡಿಶಾಗೆ ಎದುರಾಗಿದೆ.

ಕರಾವಳಿ ತೀರಗಳಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ, ನಾಲ್ಕು ದಿನಗಳು ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳ ಬಳಿ ಪ್ರವಾಸೋದ್ಯಮ ಚಟುವಟಿಕೆ ನಿಲ್ಲಿಸುವಂತೆ ಸಲಹೆ ನೀಡಲಾಗಿದೆ. ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!