ದ.ಕ. ಬಿಜೆಪಿ ಅಭ್ಯರ್ಥಿ ಗೆಲುವಿಗೆ ಒಟ್ಟಾಗಿ ಕೆಲಸ: ಅರುಣ್ ಪುತ್ತಿಲ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪುತ್ತೂರಿನ ಹಿಂದು ಮುಖಂಡ ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಸಮ್ಮತಿ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ ಮುಖಂಡರ ಜೊತೆಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮ ಮುಂದೆ ಮಾತನಾಡಿದ ಅರುಣ್ ಪುತ್ತಿಲ, ಈ ರಾಷ್ಟ್ರದ ಗೌರವವನ್ನು ಎತ್ತರಕ್ಕೆ ಏರಿಸಿದ ಪ್ರಧಾನಿ ಮೋದಿ ಅವರ  ಕೆಲಸ ಕಾರ್ಯಗಳಿಗೆ ಶಕ್ತಿ ತುಂಬ ಬೇಕೆಂಬ ಯೋಚನೆಯಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗು ಹಲವು ಮುಖಂಡರ ಜೊತೆಗೆ ಮಾತುಕತೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿಯನ್ನು ಅತೀ ಹೆಚ್ಚು ಮತಗಳಿಂದ ಗೆಲ್ಲಿಸಲು ಒಟ್ಟಾಗಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!