June 3, 2026
Wednesday, June 3, 2026
spot_img

ಡಿ.ಕೆ.ಶಿವಕುಮಾರ್ ಸಿಎಂ ಪಟ್ಟಾಭಿಷೇಕ: ವಿಧಾನಸೌಧ, ಲೋಕಭವನ ಸುತ್ತಮುತ್ತ ಹೈ-ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಇಂದು ಅತ್ಯಂತ ಪ್ರಮುಖ ದಿನವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಾದ್ಯಂತ, ವಿಶೇಷವಾಗಿ ಲೋಕಭವನ ಹಾಗೂ ವಿಧಾನಸೌಧದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಹೈ-ಅಲರ್ಟ್ ಘೋಷಿಸಲಾಗಿದೆ.

ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಸುಗಮ ಕಾನೂನು ಸುವ್ಯವಸ್ಥೆ ಕಾಪಾಡಲು ಬೆಂಗಳೂರು ನಗರ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ನೇರ ನೇತೃತ್ವದಲ್ಲಿ ಇಡೀ ಭದ್ರತಾ ವ್ಯವಸ್ಥೆಯನ್ನು ರೂಪಿಸಲಾಗಿದ್ದು, ಇಡೀ ನಗರವನ್ನು ಒಂದು ಭದ್ರತಾ ಕೋಟೆಯನ್ನಾಗಿ ಪರಿವರ್ತಿಸಲಾಗಿದೆ.

2,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ

ಬಿಗಿ ಬಂದೋಬಸ್ತ್‌ಗಾಗಿ 3 ಜಂಟಿ ಪೊಲೀಸ್ ಆಯುಕ್ತರು, 20 ಕ್ಕೂ ಹೆಚ್ಚು ಡಿಸಿಪಿಗಳು ಸೇರಿದಂತೆ 2,000ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಇದರೊಂದಿಗೆ ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ತುಕಡಿಗಳನ್ನು ಸಹ ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ.

ಪ್ರತಿ ಸೆಕ್ಟರ್‌ಗೆ ಒಬ್ಬರು ಡಿಸಿಪಿ ಉಸ್ತುವಾರಿ

ಭದ್ರತೆಯನ್ನು ಅತ್ಯಂತ ವ್ಯವಸ್ಥಿತವಾಗಿ ನಿರ್ವಹಿಸಲು ಇಡೀ ಸುರಕ್ಷತಾ ವಲಯವನ್ನು ವಿವಿಧ ಸೆಕ್ಟರ್‌ಗಳಾಗಿ ವಿಂಗಡಿಸಲಾಗಿದೆ. ಭದ್ರತೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಪ್ರತಿ ಸೆಕ್ಟರ್‌ಗೂ ಓರ್ವ ಡಿಸಿಪಿ ಅವರಿಗೆ ನೇರ ಉಸ್ತುವಾರಿ ಮತ್ತು ಜವಾಬ್ದಾರಿಯನ್ನು ವಹಿಸಲಾಗಿದೆ. ವಿವಿಐಪಿ ಮೂವ್‌ಮೆಂಟ್ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಟ್ರಾಫಿಕ್ ಕಂಟ್ರೋಲ್ ರೂಮ್ ಕೂಡ ಅಲರ್ಟ್ ಆಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !